Home ದೇಶ ತಿಹಾರ್ ಜೈಲಿನ ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ: ಕೇಜ್ರಿವಾಲ್

ತಿಹಾರ್ ಜೈಲಿನ ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ: ಕೇಜ್ರಿವಾಲ್

0

ದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನ ಸೂಪರಿಂಟೆಂಡೆಂಟ್‌ಗೆ ಪತ್ರ ಬರೆದು ಪ್ರತಿನಿತ್ಯ ಇನ್ಸುಲಿನ್ ಚುಚ್ಚುಮದ್ದು ಅಗತ್ಯವಿದೆ ಎಂದು ಹೇಳಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಕ್ಕರೆ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿದಿನ ಇನ್ಸುಲಿನ್ ತೆಗೆದುಕೊಳ್ಳಲು ಅನುಮತಿ ಕೋರುತ್ತಿರುವುದಾಗಿ ಸೋಮವಾರ ಪತ್ರ ಬರೆದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ಬಹಿರಂಗಪಡಿಸಿವೆ. ಮುಖ್ಯಮಂತ್ರಿಯವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಜೈಲು ಅಧಿಕಾರಿಗಳು ಏಮ್ಸ್ ವೈದ್ಯರಿಗೆ ತಿಳಿಸಿರುವುದನ್ನು ಅವರು ನಿರಾಕರಿಸಿದರು.

ರಾಜಕೀಯ ಒತ್ತಡದಿಂದ ಜೈಲು ಅಧಿಕಾರಿಗಳು ಸುಳ್ಳು ಹೇಳಿದ್ದಾರೆ ಎಂದು ಕೇಜ್ರಿವಾಲ್ ಜೈಲು ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ. ಜೈಲಿನಲ್ಲಿ ದಿನಪತ್ರಿಕೆಗಳನ್ನು ಓದಿ ಅಧಿಕಾರಿಗಳು ಹೇಳಿದ್ದನ್ನು ಕೇಳಿ ಬೇಸರವಾಯಿತು ಎಂದು ಕೇಜ್ರಿವಾಲ್ ಪತ್ರದಲ್ಲಿ ಹೇಳಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

You cannot copy content of this page

Exit mobile version