Friday, June 27, 2025

ಸತ್ಯ | ನ್ಯಾಯ |ಧರ್ಮ

‘1 ಲಕ್ಷ ಲಡ್ಡುಗಳನ್ನು ಅಯೋಧ್ಯೆಗೆ ಕಳುಹಿಸಲಾಗಿತ್ತು’, ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ವರದಿಗೆ ಆರ್‌ಎಸ್‌ಎಸ್ ಆಕ್ರೋಶ

ತಿರುಪತಿ ದೇವಸ್ಥಾನದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆ ಬಳಕೆ ವಿವಾದ ನಿಲ್ಲುತ್ತಿಲ್ಲ. ಇದೀಗ ಈ ಕುರಿತು ಮತ್ತೊಂದು ದೊಡ್ಡ ಮಾಹಿತಿ ಹೊರಬಿದ್ದಿದೆ. ತಿರುಪತಿ ದೇಗುಲದ ಲಡ್ಡು ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖವಾಣಿ ಪಾಂಚಜನ್ಯ ದೊಡ್ಡ ಆರೋಪವನ್ನೇ ಮಾಡಿದೆ.

ತಿರುಪತಿ ತಿರುಮಲ ದೇವಸ್ಥಾನದಿಂದ ಅಯೋಧ್ಯೆಗೆ 1 ಲಕ್ಷ ಲಡ್ಡುಗಳನ್ನು ಕಳುಹಿಸಲಾಗಿದೆ ಎಂದು ಮುಖವಾಣಿಯಲ್ಲಿ ಪ್ರಕಟವಾದ ವರದಿ ಹೇಳಿದೆ.

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆಯ ದಿನದಂದು ತಿರುಪತಿ ದೇವಸ್ಥಾನದಿಂದ 1 ಲಕ್ಷ ಲಡ್ಡುಗಳನ್ನು ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಲಡ್ಡುಗಳನ್ನು ಅಯೋಧ್ಯೆಯಲ್ಲಿ ಭಕ್ತರಿಗೆ ಹಂಚಲಾಯಿತು. ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ದನದ ಕೊಬ್ಬು ಮತ್ತು ಮೀನಿನ ಎಣ್ಣೆಯನ್ನು ಬೆರೆಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಇದೆಲ್ಲ ನಡೆದಿದ್ದು ಅಂದಿನ ಆಂಧ್ರಪ್ರದೇಶದ ಜಗನ್ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page