ಚೆನ್ನೈ: ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಭಾರೀ ಅಗ್ನಿ ಅವಘಡವೊಂದು ಸಂಭವಿಸಿದೆ. ರೈಲಿನ ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ಅವಘಡದಲ್ಲಿ ಬೋಗಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಏಳು ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ.

ವಿವರಗಳ ಪ್ರಕಾರ, ಮಧುರೈ ರೈಲು ನಿಲ್ದಾಣದಲ್ಲಿ ಶನಿವಾರ ಮುಂಜಾನೆ IRCTC ವಿಶೇಷ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ರೈಲಿನ ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು ಕಾರಣ ಎನ್ನಲಾಗಿದೆ. ನಂತರ ಗಾಳಿಯಿಂದಾಗಿ ರೈಲಿನ ತುಂಬಾ ಬೆಂಕಿ ಹರಡಿದೆ. ಮಾಹಿತಿ ಬಂದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಅಷ್ಟರಲ್ಲಿ ಪ್ರವಾಸಿ ರೈಲು ಲಕ್ನೋದಿಂದ ಹೊರಟು ಮಧುರೈ ತಲುಪಿತು. ಈ ಅಗ್ನಿ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅಪಘಾತದಲ್ಲಿ ಇನ್ನೂ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದಾಗ ರೈಲಿನಲ್ಲಿ 63 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ. ಅಗ್ನಿಶಾಮಕ ವಾಹನಗಳು ಮತ್ತು ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು ಮತ್ತು ಬೋಗಿಯ ಸಂಪರ್ಕವನ್ನು ತೆಗೆದುಹಾಕಿದರು. ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದೆ. ರೈಲಿನ ಬೋಗಿಯಲ್ಲಿ ಖಾಸಗಿ ಟೀ ಪಾರ್ಟಿಯ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಪ್ರಯಾಣಿಕರು ರಹಸ್ಯವಾಗಿ ಸಿಲಿಂಡರ್ ಅನ್ನು ರೈಲು ಬೋಗಿಗೆ ತಂದಿದ್ದಾರೆ ಎಂದು ವರದಿಯಾಗಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಲಿಂಡರ್ ರೈಲು ಹೇಗೆ ಬಂತು ಎಂದು ತನಿಖೆ ನಡೆಸುತ್ತಿದ್ದಾರೆ.
https://twitter.com/PTTVOnlineNews/status/1695261135942070566?s=20