Friday, June 20, 2025

ಸತ್ಯ | ನ್ಯಾಯ |ಧರ್ಮ

ಇಂದು ಕಾನೂನು ಸುವ್ಯವಸ್ಥೆ ಕುರಿತು ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬಿಜೆಪಿ ನಾಯಕರು ಜುಲೈ 12ರಂದು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು “ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ” ಕುರಿತು ಮಾತನಾಡಲು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಜೈನ ಮಠಾಧೀಶರ ಹತ್ಯೆ ಪ್ರಕರಣ ಮತ್ತಿತರ ಘಟನೆಗಳನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರು.

“ರಾಜ್ಯದ ಪರಿಸ್ಥಿತಿಯ ಕುರಿತು ಪಕ್ಷವು ಪ್ರತಿಭಟನೆ ನಡೆಸಿ ರಾಜ್ಯಪಾಲರನ್ನು ಭೇಟಿ ಮಾಡಲಿದೆ. ಜೈನ ಮಠಾಧೀಶರ ಭೀಕರ ಹತ್ಯೆ ಪ್ರಕರಣವನ್ನು ಸರ್ಕಾರ ಲಘುವಾಗಿ ಪರಿಗಣಿಸಿದೆ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಜನತೆ ಒತ್ತಾಯಿಸುತ್ತಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ನಾವು ಕೂಡ ಮನವಿ ಸಲ್ಲಿಸಿದ್ದೇವೆ” ಎಂದು ಬೊಮ್ಮಾಯಿ ಹೇಳಿದರು.

‘‘ಟಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ, ಸಕಲೇಶಪುರದ ಕೊಲೆ ಪ್ರಕರಣ ವರದಿ… ಮರಳು ಮಾಫಿಯಾ ವಿರುದ್ಧ ಕಾರ್ಯಾಚರಣೆಗಿಳಿದ ಪೊಲೀಸ್ ಪೇದೆ ಹತ್ಯೆ. ಸುಲಿಗೆಗೆ ಸಿಬ್ಬಂದಿ ಮೇಲೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಸಮಾಜಘಾತುಕರಿಗೆ ಧೈರ್ಯ ಬಂದಿದೆ. ಅವರು ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಬಹುದೆನ್ನುವ ಸ್ಥಿತಿಗೆ ತಲುಪಿದ್ದಾರೆ.ಕಾಂಗ್ರೆಸ್ ಸರ್ಕಾರದ ಒಂದೂವರೆ ತಿಂಗಳ ಆಡಳಿತದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು” ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page