ಚಿಕ್ಕಮಂಗಳೂರಿನಲ್ಲೂ ಕೂಡ ಮಹೇಶ ದಸರಾ ಆಚರಣೆ ಹಿನ್ನೆಲೆಯಲ್ಲಿ ಇಂದಿನಿಂದ 6 ದಿನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಮಹಿಷ ದಸರ ಆಚರಣೆ ವಿಚಾರವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದರ ಜೊತೆಗೆ ಈ ಕಾರ್ಯಕ್ರಮಕ್ಕೆ ಪ್ರೋ.ಕೆ.ಎಸ್.ಭಗವಾನ್ ಅವರು ಆಗಮಿಸುವ ಹಿನ್ನೆಲೆಯಲ್ಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಚಿಕ್ಕಮಂಗಳೂರಿನಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಹಿಷ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಂಘಟನೆಗಳಿಂದ ಮಹಿಷ ದಸರಾ ಆಯೋಜನೆ ಮಾಡಿದೆ. ಕಾರ್ಯಕ್ರಮಕ್ಕೆ ಸಂಘಟನೆಗಳ ಕಡೆಯಿಂದ ಮುಖ್ಯ ಅತಿಥಿಯಾಗಿ ಪ್ರೊ. ಕೆಎಸ್ ಭಗವಾನ್ ಅವರಿಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಪ್ರೊ. ಕೆಎಸ್ ಭಗವಾನ್ ಆಗಮನಕ್ಕೆ ಜಿಲ್ಲೆಯಯಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜರಿಂದ ಆದೇಶ ಹೊರಡಿಸಲಾಗಿದೆ.