Monday, January 12, 2026

ಸತ್ಯ | ನ್ಯಾಯ |ಧರ್ಮ

ಕೇರಳದಲ್ಲಿ ಧಾರಾಕಾರ ಮಳೆ – 11 ಸಾವು

ಕೇರಳ: ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೇರಳದಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ತಿರುವನಂತಪುರಂ, ಕೊಚ್ಚಿ, ತ್ರಿಶೂರ್, ಕೋಯಿಕ್ಕೋಡ್, ಎರ್ನಾಕುಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್ ಮತ್ತು ವಯನಾಡ್ ಸೇರಿದಂತೆ ಹಲವು ಪ್ರಮುಖ ನಗರಗಳು ಸಂಪೂರ್ಣ ಜಲಾವೃತಗೊಂಡಿವೆ.

7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಏಳು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಎರ್ನಾಕುಲಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಐಎಂಡಿ ಹಳದಿ ಎಚ್ಚರಿಕೆ ನೀಡಿದೆ. ಈ ಜಿಲ್ಲೆಗಳಲ್ಲಿ 6 ಸೆಂ.ಮೀ ನಿಂದ 11 ಸೆಂ.ಮೀ ಮಳೆಯಾಗುವ ಸಾಧ್ಯತೆ ಇದೆ.

11 ಸಾವು ದಾಖಲು: ಕೇರಳ ರಾಜ್ಯದ ಕಂದಾಯ ಸಚಿವ ಕೆ.ರಾಜನ್

ಭಾರೀ ಮಳೆಗೆ ರಾಜ್ಯಾದ್ಯಂತ ಕನಿಷ್ಠ 11 ಸಾವುಗಳು ವರದಿಯಾಗಿವೆ ಎಂದು ರಾಜ್ಯ ಕಂದಾಯ ಸಚಿವ ಕೆ.ರಾಜನ್ ತಿಳಿಸಿದ್ದಾರೆ. ಮೇ 9 ರಿಂದ 23 ರವರೆಗೆ ಈ ಸಾವುಗಳು ದಾಖಲಾಗಿವೆ ಎಂದು ಅವರು ಹೇಳಿದರು. 11 ಜನರಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ, ಇಬ್ಬರು ಕ್ವಾರಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ, ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಜನರು ಜಾಗೃತರಾಗಿರಲು ಕೋರಲಾಗಿದೆ. ನೀರಿನ ಹರಿವುಗಳು ಮತ್ತು ಕರಾವಳಿ ಪ್ರದೇಶಗಳಿಂದ ದೂರವಿರುವಂತೆ ಅವರು ಎಚ್ಚರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page