Saturday, June 21, 2025

ಸತ್ಯ | ನ್ಯಾಯ |ಧರ್ಮ

Breaking news : ಆಂಧ್ರಪ್ರದೇಶ ರೈಲು ದುರಂತ ; ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸಾವನ್ನಪ್ಪಿದ್ದು, ಕನಿಷ್ಠ 20 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಒಡಿಶಾದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಬಳಿ ಹಳಿ ತಪ್ಪಿದ ಪರಿಣಾಮ ಈ ಘಟನೆ ಸಂಭವಿಸಿದೆ. ಗಾಯಗೊಂಡವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ತಕ್ಷಣದ ಪರಿಹಾರ ಕ್ರಮಗಳಿಗೆ ಆದೇಶಿಸಿದ್ದಾರೆ ಮತ್ತು ವಿಜಯನಗರಂಗೆ ಹತ್ತಿರದ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಪಲ್ಲಿಯಿಂದ ಗಣನೀಯ ಸಂಖ್ಯೆಯ ಆಂಬ್ಯುಲೆನ್ಸ್ಗಳನ್ನು ಕಳುಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page