Home ಬ್ರೇಕಿಂಗ್ ಸುದ್ದಿ ಟ್ರಕ್ ಚಾಲಕರ ಮುಷ್ಕರ ವಾಪಸ್ : ಕೇಂದ್ರ ಹೇಳಿದ್ದೇನು?

ಟ್ರಕ್ ಚಾಲಕರ ಮುಷ್ಕರ ವಾಪಸ್ : ಕೇಂದ್ರ ಹೇಳಿದ್ದೇನು?

0

ದೇಶಾದ್ಯಂತ ದೊಡ್ಡ ಮಟ್ಟಕ್ಕೆ ಸದ್ದಾಗಿದ್ದ ಟ್ರಕ್ ಚಾಲಕರ ಮುಷ್ಕರಕ್ಕೆ ಇಂದು ತೆರೆ ಬಿದ್ದಿದೆ. ಕೇಂದ್ರ ಗೃಹ ಕಾರ್ಯದರ್ಶಿ ಜೊತೆ ಸಭೆ ನಂತರ ದೇಶಾದ್ಯಂತ ಟ್ರಕ್ ಚಾಲಕರು ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಮುಷ್ಕರ ವಾಪಸ್ ಪಡೆದಿದ್ದು, ಸರಕು ಸಾಗಣೆ ವಾಹನಗಳ ಚಾಲಕರು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಹೊಸ ಕಾನೂನು ವಿರೋಧಿಸಿ ಲಾರಿ ಚಾಲಕರು ಮುಷ್ಕರ ಹೂಡಿದ್ದರು.ಇದರಿಂದ ದೇಶಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಅವ್ಯವಸ್ಥೆ ಉಂಟಾಗಿತ್ತು. ಇದರಿಂದ ಪೆಟ್ರೋಲ್ ಡೀಸೆಲ್ ನ ಸಾಗಾಣೆಗೂ ದೊಡ್ಡ ಪ್ರಮಾಣದಲ್ಲಿ ವ್ಯತ್ಯಯ ಉಂಟಾಗಿತ್ತು

ನಿರಂತರ ಸುದ್ದಿಗಳಿಗೆ ನಮ್ಮ ವಾಟ್ಸಾಪ್ ಗುಂಪನ್ನು ಸೇರಿ : ಪೀಪಲ್ ಮೀಡಿಯಾ

ಟ್ರಕ್ ಚಾಲಕರ ಅಸೋಸಿಯೇಷನ್ ಜೊತೆಗೆ ನಡೆಸಿದ ಸಭೆಯ ನಂತರ ಮಾತನಾಡಿದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, “ನಾವು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಹೊಸ ನಿಯಮವನ್ನು ಇನ್ನೂ ಜಾರಿಗೆ ತಂದಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಜೊತೆಗೆ ಭಾರತೀಯ ನ್ಯಾಯ ಸಂಹಿತಾ 106/2 ಅನ್ನು ಜಾರಿಗೊಳಿಸುವ ಮೊದಲು ನಾವು ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ನಂತರವೇ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

You cannot copy content of this page

Exit mobile version