Friday, August 1, 2025

ಸತ್ಯ | ನ್ಯಾಯ |ಧರ್ಮ

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ದ್ವಿ-ರಾಷ್ಟ್ರ ಪರಿಹಾರ ಸೂಕ್ತ: ಕೇಂದ್ರ ಸರ್ಕಾರ

ದೆಹಲಿ: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷಕ್ಕೆ ಪರಿಹಾರವೆಂದರೆ, ಪರಸ್ಪರ ಮಾತುಕತೆ ಮೂಲಕ ಎರಡೂ ರಾಷ್ಟ್ರಗಳು ಸ್ವತಂತ್ರ ಮತ್ತು ಸಾರ್ವಭೌಮ ದೇಶಗಳಾಗಿ ತಮ್ಮ ಗಡಿಗಳನ್ನು ಗುರುತಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ತಿಳಿಸಿದೆ.

ಪ್ಯಾಲೆಸ್ತೀನ್‌ಗೆ ಭಾರತದ ಬೆಂಬಲವು ವಿದೇಶಾಂಗ ನೀತಿಯ ಭಾಗವಾಗಿದೆಯೇ ಎಂಬ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ಲಿಖಿತ ಉತ್ತರ ನೀಡಿದರು. “ಇಸ್ರೇಲ್‌ನೊಂದಿಗೆ ಗಡಿ ಹಂಚಿಕೊಂಡು, ಶಾಂತಿಯುತವಾಗಿ ಪ್ಯಾಲೆಸ್ತೀನ್ ಅಸ್ತಿತ್ವದಲ್ಲಿರಬೇಕು ಎಂಬುದು ನಮ್ಮ ನೀತಿ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ ಎಂದು ಸಚಿವರು ಹೇಳಿದರು. “ಕೂಡಲೇ ಕದನ ವಿರಾಮ ಜಾರಿಯಾಗಬೇಕು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಮತ್ತು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮೂಲಕ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು ಎಂಬುದು ಭಾರತದ ಉದ್ದೇಶ” ಎಂದು ಅವರು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page