Saturday, June 21, 2025

ಸತ್ಯ | ನ್ಯಾಯ |ಧರ್ಮ

ಸನಾತನ ಧರ್ಮದ ಕ್ರೌರ್ಯಕ್ಕೆ ‘ಸಂಸತ್ ಭವನ ಉದ್ಘಾಟನೆ’ ನೆನಪಿಸಿದ ಉದಯನಿಧಿ ಸ್ಟಾಲಿನ್

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಭಾಗವಹಿಸಲು ಆಹ್ವಾನಿಸದೇ ಇರುವುದು ಸನಾತನ ಧರ್ಮದ ಕ್ರೌರ್ಯಕ್ಕೆ ಹಿಡಿದ ಕನ್ನಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರದ ದಿನ ಮಾಧ್ಯಮಗಳು ಪ್ರಶ್ನೆಗೆ ಉತ್ತರಿಸುತ್ತಾ ಉದಯನಿಧಿ ಸ್ಟಾಲಿನ್ ಈ ರೀತಿಯಾಗಿ ಉತ್ತರಿಸಿದ್ದಾರೆ. ಮಾಧ್ಯಮಗಳು ಜಾತಿ ತಾರತಮ್ಯದ ಆಚರಣೆಗೆ ನೀವು ಯಾವುದಾದರೂ ಉದಾಹರಣೆಯನ್ನು ನೀಡಬಹುದೇ ಎಂದು ಕೇಳಿದಾಗ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, “ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿ ಹುದ್ದೆಯಲ್ಲಿ ಇರುವ ದ್ರೌಪದಿ ಮುರ್ಮು ಅವರನ್ನೇ ಆಹ್ವಾನಿಸಲಾಗಿಲ್ಲ, ಇದು ಅತ್ಯುತ್ತಮ ಪ್ರಸ್ತುತ ಉದಾಹರಣೆಯಾಗಿದೆ” ಎಂದಿದ್ದಾರೆ.

ಸನಾತನ ಧರ್ಮವನ್ನು ಡೆಂಗಿ ಹಾಗೂ ಮಲೇರಿಯಾಗೆ ಹೋಲಿಸಿ, ಅದರ ನಿರ್ಮೂಲನೆಗೆ ಕರೆ ನೀಡಿದ್ದ ಸ್ಟಾಲಿನ್ ಹೇಳಿಕೆ ಈಗ ದೇಶವ್ಯಾಪಿ ಚರ್ಚೆಗೆ ಕಾರಣವಾಗಿದೆ. ಉದಯನಿಧಿ ಸ್ಟಾಲಿನ್ ಬೆಂಬಲಿಸಿ ಹೇಳಿಕೆ ನೀಡಿದ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆಯವರ ವಿರುದ್ಧವೂ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ : ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ FIR

ಉದಯನಿಧಿ ಅವರ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಇದೇ ವಿಷಯವಾಗಿ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿರುವುದಾಗಿ ಸುಬ್ರಮಣಿಯನ್ ಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page