Saturday, July 12, 2025

ಸತ್ಯ | ನ್ಯಾಯ |ಧರ್ಮ

ನೇಜಾರ್ ಹತ್ಯೆ ಪ್ರಕರಣ: 2202 ಪುಟಗಳ ಆರೋಪಪಟ್ಟಿ ದಾಖಲಿಸಿದ ಉಡುಪಿ ಪೊಲೀಸರು

ಉಡುಪಿ: ನೇಜಾರಿನ ತೃಪ್ತಿ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು 15 ಸಂಪುಟಗಳ 2,202 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಶನಿವಾರ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

“ನಾವು ನವೆಂಬರ್ 15, 2023ರಂದು ನಡೆದ ನಾಲ್ಕು ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಬಂಧಿಸಿದ್ದೇವೆ.

ನಿಗದಿತ ಕಾಲಮಿತಿಯೊಳಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದೇವೆ. ಎಫ್‌ಎಸ್‌ಎಲ್ ವರದಿಗಳು ಸೇರಿದಂತೆ ಬಹುತೇಕ ಎಲ್ಲಾ ವರದಿಗಳನ್ನು ನಾವು ಸ್ವೀಕರಿಸಿದ್ದೇವೆ. 244 ಸಾಕ್ಷಿಗಳ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದೇವೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಪ್ರಸಾದ್ ಆಳ್ವ ಅವರ ಸಲಹೆಯಂತೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಎಲ್ಲಾ ವರದಿಗಳು, ಸಾಕ್ಷ್ಯಗಳು ಮತ್ತು ಸಾಕ್ಷಿ ಹೇಳಿಕೆಗಳನ್ನು ಸಂಗ್ರಹಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಆದಷ್ಟು ಬೇಗ ವಿಚಾರಣೆ ಆರಂಭಿಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಿದ್ದೇವೆ” ಎಂದು ಎಸ್‌ಪಿ ಹೇಳಿದರು.

ನವೆಂಬರ್ 12ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರ್‌ನ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್‌ಲೈನ್ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಹಿರಿಯ ಕ್ಯಾಬಿನ್ ಸಿಬ್ಬಂದಿ ಚೌಗುಲೆಯನ್ನು ಬಂಧಿಸಲಾಗಿದೆ. ಮೃತರು ಹಸೀನಾ, 46, ಅವರ ಪುತ್ರಿಯರಾದ ಅಫ್ನಾನ್. , 23, ಐನಾಜ್, 21, ಮತ್ತು ಮಗ ಆಸೀಮ್, 12, ತಮ್ಮ ಮನೆಯಲ್ಲಿ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page