Friday, June 20, 2025

ಸತ್ಯ | ನ್ಯಾಯ |ಧರ್ಮ

UAPA ವಿರುದ್ಧ ಉಮರ್‌ ಖಾಲಿದ್‌ ಸುಪ್ರೀಂ ಕೋರ್ಟ್‌ಗೆ

ಬೆಂಗಳೂರು,ಅಕ್ಟೋಬರ್.‌21: ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ತಮ್ಮ ಮೇಲಿನ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿರುವ ಪ್ರಕರಣಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾರೆ.

2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಖಾಲಿದ್ ಸೆಪ್ಟೆಂಬರ್ 2020 ರಿಂದ ಬಂಧನದಲ್ಲಿದ್ದಾರೆ.

ಫೆಬ್ರವರಿ 23 ರಿಂದ ಫೆಬ್ರವರಿ 26, 2020 ರವರೆಗೆ ಈಶಾನ್ಯ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ  ಸಂಘರ್ಷದಲ್ಲಿ 53 ಮಂದಿ ಹತರಾಗಿ, ನೂರಾರು ಮಂದಿ ಗಾಯಗೊಂಡಿದ್ದರು. ಇವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರು.

ಈ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಮಾನಹಾನಿ ಮಾಡುವ ದೊಡ್ಡ ಪಿತೂರಿಯ ಭಾಗ ಎಂದು ದೆಹಲಿ ಪೊಲೀಸರು ಹೇಳಿದ್ದರು.

ಶುಕ್ರವಾರ, ವಿಭಾಗೀಯ ಪೀಠವು ಯುಎಪಿಎ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಇತರ ಅರ್ಜಿಗಳೊಂದಿಗೆ ಖಾಲಿದ್ ಅವರ ಅರ್ಜಿಯನ್ನು ಕೂಡ ಟ್ಯಾಗ್ ಮಾಡಿದೆ.

ಸೆಪ್ಟೆಂಬರ್ 13, 2020 ರಂದು ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟ ಖಾಲಿದ್ ಅವರು ಈ ಹಿಂಸಾಚಾರದಲ್ಲಿ ಯಾವುದೇ ಪಾತ್ರವನ್ನು ಹೊಂದಿಲ್ಲ ಅಥವಾ ಪ್ರಕರಣದ ಇತರ ಆರೋಪಿಗಳೊಂದಿಗೆ ಯಾವುದೇ  ಸಂಬಂಧವನ್ನು ಹೊಂದಿಲ್ಲ” ಎಂದು ವಾದಿಸಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ ಉಮರ್ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು.

ಖಾಲಿದ್ ಪ್ರಕರಣವು ಮೊದಲ ಬಾರಿಗೆ ಮೇ 18 ರಂದು ಸುಪ್ರೀಂ ಕೋರ್ಟ್‌ ಅಂಗಳಕ್ಕೆ ಬಂತು. ನಂತರ ಆರು ಬಾರಿ ಮುಂದೂಡಲ್ಪಟ್ಟ ಕಾರಣ ಪೊಲೀಸರು ಕೌಂಟರ್‌ ಅಫಿಡವಿಟ್ ಸಲ್ಲಿಸಲು ಹೆಚ್ಚಿನ ಸಮಯ ಕೋರಿದರು. ಓರ್ವ ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿಯುತ್ತಾರೆ.  ಖಾಲಿದ್ ಅವರ ವಕೀಲರ ಅಲಭ್ಯತೆಯಿಂದಾಗಿ ಪ್ರಕರಣವನ್ನು ಬೇರೆ ಬೇರೆ ದಿನಗಳಿಗೆ ಪಟ್ಟಿ ಮಾಡಲಾಗಿತ್ತು.

ನಾಗರಿಕರ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನ್ಯಾಯಾಲಯಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ ಪದೇ ಪದೇ ಈ ಪ್ರಕರಣವನ್ನು ಮುಂದೂಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page