Home ರಾಜಕೀಯ ಸಮವಸ್ತ್ರ ನೀತಿ ಮುಸಲ್ಮಾನರಿಗೆ ಮಾತ್ರ ಅಲ್ಲ, ಹಿಂದೂಗಳಿಗೂ ಇಲ್ಲ: ಯತ್ನಾಳ್

ಸಮವಸ್ತ್ರ ನೀತಿ ಮುಸಲ್ಮಾನರಿಗೆ ಮಾತ್ರ ಅಲ್ಲ, ಹಿಂದೂಗಳಿಗೂ ಇಲ್ಲ: ಯತ್ನಾಳ್

0

ಹಿಜಾಬ್ ಬ್ಯಾನ್ ವಾಪಸ್ ಊಟ ಬಟ್ಟೆ ಅವರವರ ಆಯ್ಕೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯ ಕುರಿತು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ಹಾಗಾದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ ಎಂದಿದ್ದಾರೆ.

ಸಿದ್ದರಾಮಯ್ಯನವರಿಗೆ ಮಾಹಿತಿಯ ಕೊರತೆ ಇದೆ, ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿ ಯಾವ ಆದೇಶವೂ ಇಲ್ಲ,
ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯನ್ನು ಜಾರಿ ಮಾಡಿದ್ದು ಸ್ಥಳೀಯ ಕಾಲೇಜುಗಳು ನಿರ್ಧಾರ ಮಾಡಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹೇಳಿದ್ದರೂ, ರಾಜಕಾರಣಕ್ಕಾಗಿ ಶಾಲಾ ಕಾಲೇಜುಗಳ ಸಮವಸ್ತ್ರ ನೀತಿಯನ್ನೂ ಅಮಾನತು ಮಾಡುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಯತ್ನಾಳ್ ದೂರಿದ್ದಾರೆ.

ಓಲೈಕೆ ರಾಜಕಾರಣಕ್ಕೇನಾದರೂ ಮತ್ತೊಂದು ಹೆಸರು ಇದ್ದರೇ ಅದು ಕಾಂಗ್ರೆಸ್ ಪಕ್ಷ!
ರಾಜ್ಯಾದ್ಯಂತ ಹಿಂದೂ ವಿದ್ಯಾರ್ಥಿಗಳೂ ಯಾವ ಬಟ್ಟೆಯಾದರೂ ಧರಿಸಿ ಕೇಸರಿ ಶಾಲು ಸಮೇತ ತರಗತಿಗಳಲ್ಲಿ ಭಾಗವಹಿಸುತ್ತಾರೆ, ಅವರಿಗೆ ಯಾವ ಕಿರುಕುಳ ನೀಡಬಾರದು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.

You cannot copy content of this page

Exit mobile version