Wednesday, June 18, 2025

ಸತ್ಯ | ನ್ಯಾಯ |ಧರ್ಮ

ಯುಪಿ| ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಸಾವು: ಆರೋಪಿ ಬಂಧನ

ಉತ್ತರ ಪ್ರದೇಶ: ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಿರುವ ಘಟನೆ, ಉತ್ತರ ಪ್ರದೇಶದ ಉನ್ನಾವೊ ನಗರದಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿ ರಾಜ್ ಗೌತಮ್, ಸಂತ್ರಸ್ತೆಯು ಒಬ್ಬಳೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾರೆ.

ಈ ಕುರಿತು ತನಿಖೆ ನಡೆಸಿದಾಗ, ಆ ವ್ಯಕ್ತಿಯು ಕೃತ್ಯಕ್ಕೆ ಮೊದಲು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮಾತ್ರೆಯನ್ನು ತೆಗೆದುಕೊಂಡಿದ್ದಾನೆ ಎಂದು ಹೇಳಿಕೊಂಡಿದ್ದಾನೆ. ಸಂತ್ರಸ್ತೆಯ ಪ್ರತಿಭಟನೆಯ ಹೊರತಾಗಿಯೂ, ಅವಳು ಮೂರ್ಛೆಹೋಗುವವರೆಗೆ ಮತ್ತು ಅವಳ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುವವರೆಗೂ ಅವನು ಆಕೆಯ ಮೇಲೆ ಅತ್ಯಾಚಾರವನ್ನು ಮುಂದುವರಿಸಿದ್ದು, ನಂತರ ಭಯಭೀತನಾಗಿ ಬಿಟ್ಟು ಓಡಿ ಹೋಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

ಘಟನೆ ನಡೆದು ಸ್ವಲ್ಪ ಸಮಯದ ನಂತರ ಅವಳ ತಂಗಿ ಮನೆಗೆ ಹಿಂತಿರುಗಿದ್ದು, ನೋಡಿದಾಗ ಸಂತ್ರಸ್ತೆಯು ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅತಿಯಾದ ರಕ್ತಸ್ರಾವದಿಂದ ಮಹಿಳೆಯು ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ಘಟನೆ ಬಳಿಕ ಸಂತ್ರಸ್ತೆಯ ಮೊಬೈಲ್ ಫೋನ್ ಡೇಟಾದ ಆಧಾರದ ಮೇಲೆ ಗೌತಮ್ ನನ್ನು ಬಂಧಿಸಲಾಗಿದ್ದು, ಸಂತ್ರಸ್ತೆ ಒಬ್ಬಳೇ ಇದ್ದಾಳೆ ಎಂದು ತಿಳಿದ ನಂತರ, ಅವನು ಅವಳ ಮನೆಗೆ ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವದಾಗಿ  ಗೌತಮ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಮಾಹಿತಿ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page