Home ಜನ-ಗಣ-ಮನ ಕಲೆ – ಸಾಹಿತ್ಯ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ

ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ

0

ದೆಹಲಿ: ಖ್ಯಾತ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗುಲ್ಜಾರ್ ಅವರು ಉರ್ದು ಮತ್ತು ಹಿಂದಿ ಸಾಹಿತ್ಯ ಲೋಕದಲ್ಲಿ ಹೆಸರುವಾಸಿಯಾಗಿದ್ದಾರೆ ಮತ್ತು ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಅವರನ್ನು ಪರಿಗಣಿಸಲಾಗಿದೆ. ಈ ಹಿಂದೆ 2002 ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ, ಮತ್ತು ಅವರ ಕೃತಿಗಳಿಗಾಗಿ ಸುಮಾರು ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕರು ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ ಮತ್ತು ಶಿಕ್ಷಣತಜ್ಞ. ಇವರು 100 ಕ್ಕೂ ಹೆಚ್ಚು ಪುಸ್ತಕಗಳ ಬರೆದಿದ್ದಾರೆ.

ಜ್ಞಾನಪೀಠದ ಆಯ್ಕೆ ಸಮಿತಿಯು ತಮ್ಮ ಪ್ರಕಟಣೆಯಲ್ಲಿ, “ಸಂಸ್ಕೃತ ಸಾಹಿತಿ ಜಗದ್ಗುರು ರಾಮಭದ್ರಾಚಾರ್ಯ ಮತ್ತು ಪ್ರಸಿದ್ಧ ಉರ್ದು ಸಾಹಿತಿ ಶ್ರೀ ಗುಲ್ಜಾರ್ ಎಂಬ ಖ್ಯಾತ ಬರಹಗಾರರಿಗೆ (2023 ರ) ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಎಂದು ತಿಳಿಸಿದ್ದಾರೆ.

You cannot copy content of this page

Exit mobile version