ಶಹಜಹಾನ್ಪುರ: ಕಬ್ಬಿನ ಗದ್ದೆಯೊಂದರಲ್ಲಿ 12 ವರ್ಷದ ಬಾಲಕಿಯೊಬ್ಬಳ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಪೊಲೀಸ್ ಮಾಹಿತಿ ಪ್ರಕಾರ ಸಂತ್ರಸ್ತೆಯನ್ನು ಪುಷ್ಪಾ ಅಲಿಯಾಸ್ ರಜನಿ ಎಂದು ಗುರುತಿಸಲಾಗಿದೆ.
ಈ ಕುರಿತು ಶಹಜಹಾನ್ಪುರದ ಪೊಲೀಸ್ ಅಧೀಕ್ಷಕ ಎಸ್.ಆನಂದ್ ಅವರು ಮಾತನಾಡಿದ್ದು, 12 ವರ್ದದ ಬಾಲಕಿಯು ಶವವಾಗಿ ಪತ್ತೆಯಾಗಿದ್ದು, ಆಕೆಯ ಕೈಗಳನ್ನು ಕಟ್ಟಲಾಗಿತ್ತು ಮತ್ತು ಆಕೆಯ ಕುತ್ತಿಗೆಯ ಮೇಲೆ ಕೆಲವು ಗುರುತುಗಳು ಕಂಡುಬಂದಿವೆ. ಹೀಗಾಗಿ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಿಲಾಗಿದೆ ಎಂದು ಶಂಕಿಸಿದ್ದಾರೆ.
ಅಲ್ಲಿನ ಸ್ಥಳೀಯರು ನೀಡಿರುವ ಮಾಹಿತಿ ಪ್ರಕಾರ, ಸಂತ್ರಸ್ತೆಯು ತನ್ನ ಅಜ್ಜಿಯೊಂದಿಗೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿರುವ ಹೊಲದಲ್ಲಿ ಹುಲ್ಲನ್ನು ಕೊಯ್ಯುತ್ತಿದ್ದಳು ಎಂದು ಮಾಹಿತಿ ದೊರಕಿದೆ. ಆದರೆ ಬಹಳ ಹೊತ್ತಿನ ನಂತರ ಅಜ್ಜಿ ಮನೆಗೆ ಬಂದು ನೋಡದಾಗ ಮೊಮ್ಮಗಳು ಇಲ್ಲದಿರುವುದನ್ನು ಗಮನಿಸಿದ್ದಾರೆ. ನಂತರ ಅಜ್ಜಿಯು ಅಲ್ಲಿನ ಗ್ರಾಮಸ್ಥರ ಸಹಾಯದಿಂದ ಶೋಧ ನಡೆಸಿದಾಗ, ಬಾಲಕಿಯ ಶವ ಪತ್ತೆಯಾಯಿತು ಎಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಸಂತ್ರಸ್ತೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಘಟನೆಯ ತನಿಖೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.