Uniform civil code: ಉತ್ತರಾಖಂಡ ಸರ್ಕಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ತರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಮುಂದಿನ ವಾರ ವಿಶೇಷ ವಿಧಾನಸಭೆ ಅಧಿವೇಶನ ನಡೆಯಲಿದೆ.
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಿದ್ಧವಾಗಿರುವ ಮೊದಲ ರಾಜ್ಯವಾಗಿ ಉತ್ತರಾಖಂಡ ಸುದ್ದಿಯಲ್ಲಿದೆ. ನ್ಯಾಯಮೂರ್ತಿ (ನಿವೃತ್ತ) ರಂಜನಾ ದೇಸಾಯಿ ನೇತೃತ್ವದ ಸಮಿತಿಯು ಎರಡು ದಿನಗಳಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ವರದಿಯನ್ನು ಸಲ್ಲಿಸಲಿದೆ.
ದೀಪಾವಳಿ ನಂತರ ಉತ್ತರಾಖಂಡ ರಾಜ್ಯ ವಿಧಾನಸಭೆ ಅಧಿವೇಶನ ನಡೆಯಲಿದೆ ಎಂದು ವರದಿಯಾಗಿದೆ. ಈ ಸಭೆಗಳಲ್ಲಿ ಯುಸಿಸಿ ಮಸೂದೆಯನ್ನು ಪರಿಚಯಿಸಲಾಗುವುದು. ಈ ವರ್ಷದ ಜೂನ್ ತಿಂಗಳಲ್ಲಿ ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಕರಡನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಂಜನಾ ಪ್ರಕಾಶ್ ದೇಸಾಯಿ ಹೇಳಿದರು. ಅಂತೆಯೇ ಗುಜರಾತ್ ಕೂಡ 2024ರ ಲೋಕಸಭಾ ಚುನಾವಣೆಯ ಮೊದಲು ಯುಸಿಸಿಯನ್ನು ಜಾರಿಗೆ ತರಲಿದೆ ಎಂದು ಸಂಬಂಧಿತ ಮೂಲಗಳು ಹೇಳುತ್ತಿವೆ.
ರಾಜ್ಯ ಸರ್ಕಾರ ರಚಿಸಿರುವ ಸಮಿತಿ ರಾಜ್ಯದ ಜನರ ಅಭಿಪ್ರಾಯ ಕೇಳಿದ್ದ, ಈ ನಿಟ್ಟಿನಲ್ಲಿ ಅದು 2 ಲಕ್ಷ ಜನರೊಂದಿಗೆ ಮಾತನಾಡಿದೆ.