Home ಬ್ರೇಕಿಂಗ್ ಸುದ್ದಿ ವಾಜಪೇಯಿ ಪುಣ್ಯತಿಥಿಯಂದು ರಾಷ್ಟ್ರಪತಿ ಮುರ್ಮು ಸೇರಿದಂತೆ ಗಣ್ಯರಿಂದ ನಮನ

ವಾಜಪೇಯಿ ಪುಣ್ಯತಿಥಿಯಂದು ರಾಷ್ಟ್ರಪತಿ ಮುರ್ಮು ಸೇರಿದಂತೆ ಗಣ್ಯರಿಂದ ನಮನ

0

ನವದೆಹಲಿ: ಇಂದು (ಆ.16) ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಾಲ್ಕನೇ ವರ್ಷದ ಪುಣ್ಯತಿಥಿಯನ್ನು ಅವರ ಸಮಾಧಿಯಾದ ‘ಸದೈವ್‌ ಅಟಲ್‌’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ಬೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಗೃಹ ಸಚಿವ ಅಮಿತ್‌ ಶಾ, ರಾಜ್‌ನಾಥ್‌ ಸಿಂಗ್‌, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಸೇರಿದಂತೆ, ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್‌ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು.

You cannot copy content of this page

Exit mobile version