Thursday, July 31, 2025

ಸತ್ಯ | ನ್ಯಾಯ |ಧರ್ಮ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ : ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ನಿನ್ನೆ ದಾಳಿ ನಡೆಸಿದ್ದರು. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳಿಗೂ ಹಗರಣಕ್ಕೂ ಸಂಬಂಧ ಇದೆಯೇ ಎನ್ನುವ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದರ ನಡುವೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರ ವೀಡಿಯೋ ಆಧಾರಿತ ಹೇಳಿಕೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಹರೀಶ್ ನೀಡಿದಂತ ಹೇಳಿಕೆಯ ಆಧಾರದ ಮೇಲೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಬಂಧಿಸಿದ್ದಾರೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page