Saturday, June 21, 2025

ಸತ್ಯ | ನ್ಯಾಯ |ಧರ್ಮ

ಸಾಗರದ ವನಶ್ರೀ ಮಂಜಪ್ಪ ಬಂಧನ: ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ವನಶ್ರೀ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು ಹಾಗೂ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ವಸತಿ ನಿಲಯದ ಮುಖ್ಯಸ್ಥ ಎಚ್ ಪಿ ಮಂಜಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆಯೇ ತನಿಖೆಗಾಗಿ ವಶಕ್ಕೆ ಪಡೆದಿದ್ದ ಪೊಲೀಸರು ಮೃತ ಬಾಲಕಿಯ ಪೋಷಕರು ಮತ್ತು ವಸತಿ ನಿಲಯದ ಇತರ ಬಾಲಕಿಯರು ನೀಡಿದ ದೂರು ಹೇಳಿಕೆಯನ್ನು ಆಧರಿಸಿ ಪೋಕ್ಸೋ ಕಾಯಿದೆ ಅಡಿ FIR ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. 

ಬಿಜೆಪಿ ಸರ್ಕಾರದಲ್ಲಿ ಸನ್ಮಾನಗೊಂಡಿದ್ದ ಆರೋಪಿ ಮಂಜಪ್ಪ

ಜೂನ್‌ ಮೊದಲವಾರದಲ್ಲಿ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ತೇಜಸ್ವಿನಿ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಳು. ಆಕೆಗೆ ಭಾರೀ ಪ್ರಮಾಣದಲ್ಲಿ ನೀರು ಕುಡಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿ ಬಾಲಕಿಯ ಸಹಪಾಠಿಗಳು ಆರೋಪಿಸಿದ್ದರು. ಶನಿವಾರ ಬಾಲಕಿಯ ಪೋಷಕರು ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿದ್ದರು.

ವನಶ್ರೀ ಮಂಜಪ್ಪ ಎಂದೇ ಹೆಸರಾಗಿರುವ ಎಚ್ ಪಿ ಮಂಜಪ್ಪ ಆರೆಸ್ಸೆಸ್ ನಂಟು ಹೊಂದಿದ್ದು ಬಹಳ ವರ್ಷಗಳಿಂದಲೂ ಮಕ್ಕಳನ್ನು ಮತ್ತು ವಸತಿ ಶಾಲೆಯಲ್ಲಿ ಕೆಲಸಕ್ಕೆ ಸೇರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿತ್ತು

Related Articles

ಇತ್ತೀಚಿನ ಸುದ್ದಿಗಳು

You cannot copy content of this page