Monday, June 23, 2025

ಸತ್ಯ | ನ್ಯಾಯ |ಧರ್ಮ

ಬೆಳ್ತಂಗಡಿ ಮಾಜೀ ಶಾಸಕ ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಬಿಜೆಪಿ ರಾಜ್ಯದಲ್ಲಿ ಖಾತೆ ತೆರೆದಾಗ ಯಡಿಯೂರಪ್ಪರವರ ಜೊತೆಗೆ ವಿಧಾನಸಭೆಯಲ್ಲಿ ಶಾಸಕರಾಗಿದ್ದರು. ಜನತಾದಳ, ಬಿಜೆಪಿ, ಕಾಂಗ್ರೆಸ್ ಮೂರೂ ಪಕ್ಷದಲ್ಲಿ ತಮ್ಮ ರಾಜಕೀಯ ಬದುಕನ್ನು ಬೆಳೆಸಿಕೊಂಡವರು. ಕಳೆದ ಬಾರಿ ಇವರ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕಾಂಗ್ರೇಸ್ ರಕ್ಷಿತ್ ಶಿವರಾಮ್ ಅವರಿಗೆ ಟಿಕೆಟ್‌ ನೀಡಿತ್ತು.

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪುತ್ರನಾಗಿರುವ ಇವರು 1946ರ ಜನವರಿ 15ರಂದು ಜನಿಸಿದರು. ಕಳೆದ ಕೆಲ ಸಮಯದಿಂದ ಇವರ ಆರೋಗ್ಯ ತೀವ್ರವಾಗಿ ಹದಗೆಟ್ಟು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಂಗೇರರ ಪಾರ್ಥಿವ ಶರೀರ ಮೇ 9ರಂದು ಮುಂಜಾನೆ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page