ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್(76) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ರಾತ್ರಿ 2.30 ಕ್ಕೆ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ ತಮ್ಮ ಶಿಕ್ಷಣ ಪೂರ್ಣಗೊಳಿಸಿದ ಅವರು 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು.
ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ ಸೇರಿದಂತೆ ಹಲವು ಸಿನಿಮಾಗಳು ಸೇರಿದಂತೆ ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದ ಅವರು, ಮೂರು ದಶಕಗಳ ಅವಧಿಯಲ್ಲಿ ಹಾಸ್ಯ ನಟರಾಗಿ ಕನ್ನಡದ ಪ್ರೇಕ್ಷಕರನ್ನು ರಂಜಿಸುತ್ತಾ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.