Saturday, June 28, 2025

ಸತ್ಯ | ನ್ಯಾಯ |ಧರ್ಮ

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ತಮ್ಮ ತುಂಬಿದ 80 ವರ್ಷದಲ್ಲಿ ನಿಧನರಾಗಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಮಿಂಚಿ, ಹಲವು ಚಿತ್ರಗಳಲ್ಲಿ ನಟಿಸಿ, ನಿರ್ಮಾಣ ಮಾಡಿದ ದ್ವಾರಕೀಶ್ ಈಗ ತಮ್ಮ ಅಪಾರ ಬಂಧುಗಳು ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಹಲವು ದಿನಗಳಿಂದ ದ್ವಾರಕೀಶ್ ಅವರಿಗೆ ಆರೋಗ್ಯ ಸರಿಯಾಗಿರಲಿಲ್ಲ. ಹೀಗಾಗಿ ಕೆಲವು ದಿನಗಳಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗಿನ ಜಾವ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 1942 ಆಗಸ್ಟ್ 19ರಂದು ಜನಿಸಿದ ಇವರು ಕನ್ನಡದ ಪ್ರತಿಭಾನ್ವಿತ ನಟರಾಗಿ ಹೆಸರುವಾಸಿಯಾಗಿದ್ದರು. ಶಿಕ್ಷಣ ಪೂರ್ಣಗೊಂಡ ಬಳಿಕ ಇವರ ಸಹೋದರ ವಾಹನ ಬಿಡಿಭಾಗಗಳ ಬಿಸ್ನೆಸ್‌ ಆರಂಭಿಸಿದರು. ಭಾರತ್‌ ಆಟೋ ಸ್ಪೇರ್‌ ಹೆಸರಿನ ಶಾಪ್‌ ಅನ್ನು ಮೈಸೂರಿನಲ್ಲಿ ತೆರೆದಿದ್ದರು. ಮಾವ ಹುಣಸೂರು ಕೃಷ್ಣಮೂರ್ತಿ ನೆರವಿನಿಂದ ಸಿನಿಮಾರಂಗ ಪ್ರವೇಶಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page