ಬೆಂಗಳೂರು: ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಬಳಿಕ ಒಂದು ಸ್ಥಾನದ ವಿಧಾನಪರಿಷತ್ತಿನ ಉಪಚುನಾವಣೆಗೆ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಬಾಬುರಾವ್ ಚಿಂಚನಸೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ, ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಯಾವ ಅಭ್ಯರ್ಥಿಗಳು ಸ್ಪರ್ಧಿಸಲಿಲ್ಲ. ಈ ಉಪಚುನಾವಣೆಗೆ ನಾಮಪತ್ರ ಪಡೆಯಲು ಗುರುವಾರ ಕಡೆಯ ದಿನವಾಗಿತ್ತು.
ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಮುಗಿಯುತ್ತಿದ್ದಂತೆ, ಯಾವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಚಿಂಚನಸೂರು ಅವಿರೋಧವಾಗಿ ಆಯ್ಕೆಯಾಗಿದ್ದು, ಇವರ ಅಧಿಕಾರ ಅವಧಿಯು 2024 ಜೂನ್ 17 ರ ವರೆಗೆ ಇರಲಿದೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.