Thursday, June 19, 2025

ಸತ್ಯ | ನ್ಯಾಯ |ಧರ್ಮ

ವಿಧಾನ ಪರಿಷತ್‌ ಉಪಚುನಾವಣೆಗೆ ಅವಿರೋಧವಾಗಿ ಆಯ್ಕೆಯಾದ ಬಾಬುರಾವ್‌ ಚಿಂಚನಸೂರು

ಬೆಂಗಳೂರು: ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಬಳಿಕ  ಒಂದು ಸ್ಥಾನದ ವಿಧಾನಪರಿಷತ್ತಿನ ಉಪಚುನಾವಣೆಗೆ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಬಾಬುರಾವ್‌ ಚಿಂಚನಸೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ, ಚುನಾವಣೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷ ಯಾವ ಅಭ್ಯರ್ಥಿಗಳು ಸ್ಪರ್ಧಿಸಲಿಲ್ಲ. ಈ ಉಪಚುನಾವಣೆಗೆ ನಾಮಪತ್ರ ಪಡೆಯಲು ಗುರುವಾರ ಕಡೆಯ ದಿನವಾಗಿತ್ತು.

ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಮುಗಿಯುತ್ತಿದ್ದಂತೆ, ಯಾವ ಅಭ್ಯರ್ಥಿಗಳು  ನಾಮಪತ್ರ ಸಲ್ಲಿಸದ ಕಾರಣ  ಚಿಂಚನಸೂರು ಅವಿರೋಧವಾಗಿ ಆಯ್ಕೆಯಾಗಿದ್ದು, ಇವರ ಅಧಿಕಾರ ಅವಧಿಯು  2024 ಜೂನ್‌ 17 ರ ವರೆಗೆ ಇರಲಿದೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page