Sunday, June 29, 2025

ಸತ್ಯ | ನ್ಯಾಯ |ಧರ್ಮ

ನೀರಿನ ಬಿಕ್ಕಟ್ಟು: ಬೆಂಗಳೂರಿನ ಐಟಿ ಕಂಪನಿಗಳನ್ನು ಸೆಳೆಯಲು ಕೇರಳ ಪ್ರಯತ್ನ

ತಿರುವನಂತಪುರಂ: ಬೆಂಗಳೂರಿನಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದ್ದು, ಇಲ್ಲಿನ ಐಟಿ ಕಂಪನಿಗಳನ್ನು ಓಲೈಸಿ ತನ್ನ ರಾಜ್ಯಕ್ಕೆ ಕೊಂಡೊಯ್ಯಲು ಕೇರಳ ಯತ್ನಿಸುತ್ತಿದೆ. ಈ ಮೂಲಕ ಕೇರಳದಲ್ಲಿ ಹೆಚ್ಚಿನ ಐಟಿ ಕಂಪನಿಗಳನ್ನು ಆಕರ್ಷಿಸಲು ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಯೋಜಿಸಿದೆ.

ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಲು ಯೋಜಿಸುತ್ತಿರುವ ಐಟಿ ಕಂಪನಿಗಳೊಂದಿಗೆ ಚರ್ಚೆ ನಡೆಸಲು ರಾಜ್ಯದ ಅಧಿಕಾರಿಗಳ ತಂಡವನ್ನು ಬೆಂಗಳೂರಿಗೆ ನಿಯೋಜಿಸಲಾಗುವುದು ಎಂದು ಕೇರಳ ಕೈಗಾರಿಕಾ ಸಚಿವ ಪಿ. ರಾಜೀವ್ ಹೇಳಿದರು.

ಬೆಂಗಳೂರು ಮೂಲದ ಹಲವು ಐಟಿ ಕಂಪನಿಗಳು ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಲು ಆಯ್ಕೆಗಳನ್ನು ಹುಡುಕುತ್ತಿವೆ. ಕೇರಳ ರಾಜ್ಯದಲ್ಲಿನ ಅನುಕೂಲಕರ ಅಂಶಗಳ ಬಗ್ಗೆ ಇಂತಹ ಕಂಪನಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುತ್ತಿದೆ. ಸದ್ಯ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ನಮಗೆ ಕೇರಳದಲ್ಲಿ ನೀರಿನ ಲಭ್ಯತೆ ಇರುವುದು ಅನುಕೂಲಕರ ಅಂಶ’ ಎಂದು ರಾಜೀವ್ ಹೇಳಿದ್ದಾರೆ.

ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್ ಚಂದ್ರಶೇಖರ್, ‘ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ತಿರುವನಂತಪುರಂ ನಗರವನ್ನು ದೇಶದ ಐಟಿ ಕೇಂದ್ರವನ್ನಾಗಿ ಮಾಡಲಾಗುವುದು’ ಎಂದು ಇತ್ತೀಚೆಗೆ ಘೋಷಿಸಿದ್ದರು.

ಕೇರಳವು ತಿರುವನಂತಪುರಂ, ಕೊಚ್ಚಿ ಮತ್ತು ಕೊಕ್ಕೋಡ್‌ನಲ್ಲಿ ಮೂರು ಪ್ರಮುಖ ಐಟಿ ಪಾರ್ಕ್‌ಗಳನ್ನು ಹೊಂದಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಪ್ರಾದೇಶಿಕ ಐಟಿ ಪಾರ್ಕ್‌ಗಳನ್ನು ಸಹ ಹೊಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page