Home ದೇಶ ವಯನಾಡ್ ಭೂಕುಸಿತ l ಮೃತರ ಸಂಖ್ಯೆ 36ಕ್ಕೆ ಏರಿಕೆ: ಮೋ̧ದಿ ರಾಹುಲ್‌ ಗಾಂಧಿಯವರಿಂದ ನೆರವಿನ ಭರವಸೆ

ವಯನಾಡ್ ಭೂಕುಸಿತ l ಮೃತರ ಸಂಖ್ಯೆ 36ಕ್ಕೆ ಏರಿಕೆ: ಮೋ̧ದಿ ರಾಹುಲ್‌ ಗಾಂಧಿಯವರಿಂದ ನೆರವಿನ ಭರವಸೆ

0

ವಯನಾಡ್: ಇಂದು ಮುಂಜಾನೆ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗಿರಿಶ್ರೇಣಿಗಳಲ್ಲಿ ಭೂಕುಸಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿರುವ ವಯನಾಡ್ ಮಾಜಿ ಸಂಸದ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಅವರಿಗೆ ನೆರವಿನ ಭರವಸೆ ನೀಡಿದ್ದಾರೆ.

ಈ ಘಟನೆಯಲ್ಲಿ ನೂರಾರು ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೊಂದರೆಗೆ ಸಿಲುಕಿರುವ ಪ್ರದೇಶದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಮತ್ತೊಂದು ಹೆಚ್ಚುವರಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ವಯನಾಡ್ ಗೆ ತಲುಪುವುದರಲ್ಲಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹೇಳಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪಡೆಯು ಮಾಡಿರುವ ಫೇಸ್ ಬುಕ್ ಪೋಸ್ಟ್ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ಸಿಬ್ಬಂದಿಗಳಿಗೂ ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ವಯನಾಡ್ ತೆರಳುವಂತೆ ಸೂಚಿಸಲಾಗಿದೆ. ಭಾರಿ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗಳಿಗೆ ತೊಡಕುಂಟಾಗಿದೆ.

ಕೇರಳ ಬಿಜೆಪಿ ಅಧ್ಯಕ್ಷ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿರುವ ಕೆ.ಸುರೇಂದ್ರನ್ ಅವರು ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವು ನೀಡುವಂತೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

You cannot copy content of this page

Exit mobile version