Monday, June 23, 2025

ಸತ್ಯ | ನ್ಯಾಯ |ಧರ್ಮ

ನಾವು ಎನ್‌ಡಿಎ ಮೈತ್ರಿಕೂಟದಲ್ಲೇ ಮುಂದುವರೆಯುತ್ತೇವೆ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬುಧವಾರ ತಮ್ಮ ಪಕ್ಷ ಎನ್‌ಡಿಎ ಜೊತೆಯಲ್ಲಿದ್ದು, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟ ಜಯಭೇರಿ ಬಾರಿಸಿದ ಒಂದು ದಿನದ ನಂತರ ಎನ್‌ಡಿಎ ಘಟಕದ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಸಹ ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಎನ್‌ಡಿಎ ಸಭೆಯಲ್ಲಿ ಭಾಗವಹಿಸಲಿದ್ದಾರೆ.

“ನಾವು ಎನ್‌ಡಿಎಯಲ್ಲಿದ್ದೇವೆ. ಎನ್‌ಡಿಎ ಸಭೆಗೆ ಹೋಗುತ್ತಿದ್ದೇನೆ. ಮುಂದೆ, ಏನಾದರೂ ಇದ್ದರೆ ನಾವು ನಿಮಗೆ ತಿಳಿಸುತ್ತೇವೆ” ಎಂದು ನಾಯ್ಡು ಅವರ ದೆಹಲಿ ಭೇಟಿಯ ಬಗ್ಗೆ ಕೇಳಿದಾಗ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪವನ್ ಕಲ್ಯಾಣ್ ಕೂಡ ಎನ್‌ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ ಎಂದು ಜನಸೇನಾ ಮೂಲಗಳು ತಿಳಿಸಿವೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಹಿರಿಯ ನಾಯಕರು ಬುಧವಾರ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದು, ಲೋಕಸಭೆ ಚುನಾವಣೆ ಫಲಿತಾಂಶಗಳ ಅವಲೋಕನ ಮತ್ತು ಸರ್ಕಾರ ರಚನೆಯ ವಿವರಗಳ ಕುರಿತು ಚರ್ಚಿಸುತ್ತಿದ್ದಾರೆ.

ಆಂಧ್ರಪ್ರದೇಶದಿಂದ ಕ್ರಮವಾಗಿ 16 ಮತ್ತು ಎರಡು ಲೋಕಸಭಾ ಸ್ಥಾನಗಳನ್ನು ಗೆದ್ದಿರುವ ಟಿಡಿಪಿ ಮತ್ತು ಜನಸೇನಾ ಕೇಂದ್ರದಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ರಾಜ್ಯದಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದಿದೆ.

ಕಳೆದ ಐದು ವರ್ಷಗಳಲ್ಲಿ ಆಂಧ್ರಪ್ರದೇಶ ಸಾಕಷ್ಟು ನಷ್ಟವನ್ನು ಅನುಭವಿಸಿದೆ ಮತ್ತು ಅದನ್ನು ಸರಿಪಡಿಸುವ ಜವಬ್ದಾರಿ ನನ್ನ ಮೇಲಿದೆ ಎಂದು ನಾಯ್ಡು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page