Saturday, June 21, 2025

ಸತ್ಯ | ನ್ಯಾಯ |ಧರ್ಮ

ಆರೋಪಿ ಪ್ರವೀಣ್ ಅರುಣ್ ಚೌಗಲೆಯ ವಿಚಾರಣೆ ನಡೆಸುತ್ತಿದ್ದೇವೆ – ಎಸ್ಪಿ ಡಾ. ಅರುಣ್

ಉಡುಪಿ: “ಉಡುಪಿ ಜಿಲ್ಲೆಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ (39) ಎಂಬಾತನನ್ನು ಜಿಲ್ಲಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ತಿಳಿಸಿದ್ದಾರೆ.

15ರಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಸಾಬೀತಾದರೆ ಕಾನೂನು ಪ್ರಕಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ತಂಡಗಳನ್ನು ರಚಿಸಿ ತನಿಖೆ ನಡೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕುಡುಚಿ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಉಡುಪಿಗೆ ಕರೆತರಲಾಗಿದೆ. ಇದೀಗ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಪಡೆಯಲಾಗುವುದು ಎಂದರು.

ಕೆಲವು ತಾಂತ್ರಿಕ ಮತ್ತು ಗುಪ್ತಚರ ಮಾಹಿತಿಯ ಪ್ರಕಾರ ಪ್ರವೀಣನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿಚಾರಣೆ ಬಳಿಕ ಕೊಲೆಗೆ ಕಾರಣ ಸೇರಿದಂತೆ ಹಲವು ಮಾಹಿತಿ ಹೊರಬೀಳಲಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಸಮಗ್ರ ತನಿಖೆಯ ನಂತರ ಮಾಧ್ಯಮಗಳಿಗೆ ಹೆಚ್ಚಿನ ಮಾಹಿತಿ ನೀಡಲಾಗುವುದು. ಪ್ರಸ್ತುತ, ಆತ ಸಿಐಎಸ್‌ಎಫ್ ಅಥವಾ ಸಿಆರ್‌ಪಿಎಫ್‌ನಲ್ಲಿ ಕೆಲಸ ಮಾಡುತ್ತಿದ್ದಾನೆಯೇ ಎನ್ನುವುದನ್ನು ನಾವು ಖಚಿತಪಡಿಸಲು ಸಾಧ್ಯವಿಲ್ಲ. ಅವರು ಸಿವಿಲ್ ಪೊಲೀಸ್ ಆಗಿ ಕೆಲಸ ಮಾಡಿರಬಹುದು ಆದರೆ ಇನ್ನೂ ದೃಢಪಟ್ಟಿಲ್ಲ ಎಂದು ಅವರು ಹೇಳಿದರು.

ಈ ವೇಳೆ 15-20 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಅದೇ ರೀತಿ ಪ್ರವೀಣ್ ಅವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಡಾ.ಅರುಣ್ ಮಾಹಿತಿ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page