Home ಬ್ರೇಕಿಂಗ್ ಸುದ್ದಿ ಜನಕಲ್ಯಾಣ ಎನ್ನುವ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ ಖಂಡಿಸುತ್ತೇವೆ: ಶಾಸಕ ಹೆಚ್.ಪಿ. ಸ್ವರೂಪ್ ಹೇಳಿಕೆ

ಜನಕಲ್ಯಾಣ ಎನ್ನುವ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ ಖಂಡಿಸುತ್ತೇವೆ: ಶಾಸಕ ಹೆಚ್.ಪಿ. ಸ್ವರೂಪ್ ಹೇಳಿಕೆ

ಹಾಸನ: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರವರ ಕಾಂಗ್ರೆಸ್ ಸರಕಾರ ದಿವಾಳಿ ಆಗಿಹೋಗಿದ್ದರೂ ಕೂಡ ನಮ್ಮ ಸರಕಾರದಲ್ಲಿ ಜನಕಲ್ಯಾಣ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಂಡು ಹಾಸನದಲ್ಲಿ ಮಾಡಲಾಗುತ್ತಿರುವ ಸ್ವಾಭಿಮಾನಿ ಸಮಾವೇಶವನ್ನು ಜೆಡಿಎಸ್ ಪಕ್ಷದಿಂದ ಖಂಡಿಸುತ್ತೇವೆ ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು.

        ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಮೂರು ಉಪಚುನಾವಣೆ ಗೆದ್ದಿದ್ದೇವೆ. ಮಂಡ್ಯದಲ್ಲಿ ಕೂಡ ಒಬ್ಬರೂ ಮಾತ್ರ ಜೆಡಿಎಸ್ ಶಾಸಕರು ಬಿಟ್ಟರೇ ಉಳಿದ ಎಲ್ಲಾರು ಕಾಂಗ್ರೆಸ್ ಶಾಸಕರು ಇದ್ದೇವೆ. ಹಳೆ ಮೈಸೂರಿನಲ್ಲಿಯೂ ಕೂಡ ಕಾಂಗ್ರೆಸ್ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದೇವೆ. ಹಾಸನದಲ್ಲಿ ಒಬ್ಬರೂ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ಇದ್ದು, ಇಲ್ಲಿ ಶಕ್ತಿ ತುಂಬುವ ನಿಟ್ಟಿನಲ್ಲಿ ಕಾಂಗ್ರೆಸ್ ಸಮಾವೇಶ ಇಲ್ಲೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಇದೊಂದು ಹಾಸ್ಯಸ್ಪದ ಹೇಳಿಕೆಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುಧಾನ ಬಿಡುಗಡೆ ಮಾಡಿದ್ದಾರ ಬಗ್ಗೆ ಡಿಸೆಂಬರ್ ೫ರ ಸಮಾವೇಶದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಹೇಳಬೇಕೆಂದು ಸವಾಲು ಹಾಕಿದರು. ನಗರದ ವಿಮಾನ ನಿಲ್ದಾಣ, ಪ್ರೈ ಓವರ್, ಹೈಟೆಕ್ ಆಸ್ಪತ್ರೆ ಕಟ್ಟಡಗಳು, ರಸ್ತೆ ದುರಸ್ತಿ ಕಾಮಗಾರಿಗಳು ನನೆಗುದಿಗೆ ಬಿದ್ದಿದ್ದು, ಅಗತ್ಯ  ಅನುದಾನವನ್ನೇ ಬಿಡುಗಡೆ ಮಾಡಿಲ್ಲ. ಹೀಗಿರುವಾಗ ಸಮಾವೇಶ ಮಾಡುವ ಮುನ್ನ ಸರ್ಕಾರ ಜಿಲ್ಲೆಗೆ ನೀಡಿರುವ ಕೊಡುಗೆ ಏನು ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

     ರಾಜ್ಯ ಸರ್ಕಾರ ಯಾವುದೇ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಅನುದಾನವನ್ನೂ ಸಮರ್ಪಕವಾಗಿ ಬಿಡುಗಡೆ ಮಾಡುತ್ತಿಲ್ಲ. ಈ ವ? ಕೇವಲ ಒಂದು ಕೋಟಿ ರೂ. ನೀಡಿದ್ದಾರೆ. ಅದು ಸಹ ಅಸಮಾರ್ಪವಾಗಿದೆ. ಅಯಾ ಕ್ಷೇತ್ರದಲ್ಲಿ ಶಾಸಕರೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗದೇ ತೊಂದರೆ ಅನುಭಿಸುತ್ತಿದ್ದಾರೆ. ಇವರಲ್ಲಿ ಕಾಂಗ್ರೆಸ್ ಶಾಸಕರು ಸಹ ಒರತಾಗಿಲ್ಲ ಸರ್ಕಾರ ಮೊದಲು ಜಿಲ್ಲೆಯ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಿ ಈ ಕುರಿತು ಮುಂದಿನ ಚಳಿಗಾಲದ ಅಧಿವೇಶನದಲ್ಲಿಯೂ ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು. ಕಾಂಗ್ರೆಸ್ ಪಕ್ಷ ಜನಕಲ್ಯಾಣ ಸಮಾವೇಶ ಎಂದು ಹೆಸರಿಟ್ಟಿದೆ ಆದರೆ ಜನರ ಕಲ್ಯಾಣಕ್ಕಾಗಿ ಯಾವುದೇ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಕೇವಲ ತಮ್ಮ ಪಕ್ಷದ ಪ್ರಚಾರಕ್ಕೋಸ್ಕರ ಈ ಸಮಾವೇಶವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷದ ಪ್ರಚಾರಕ್ಕಾಗಿ ಈ ಸಮಾವೇಶವನ್ನು ಮಾಡಲಾಗುತ್ತಿದೆ. ಇದರಲ್ಲಿ ಜಿಲ್ಲಾಡಳಿತ ಹಾಗೂ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದ ಅವರು ಇತ್ತೀಚಿಗೆ ನಡೆದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ ಆದರೆ ಸರ್ಕಾರ ಆಡಳಿತದಲ್ಲಿ ಇರುವಾಗ ಆಯಾ

ಪಕ್ಷಗಳು ಗೆಲ್ಲುವುದು ಸಾಮಾನ್ಯ ಜನರ ಆದೇಶಕ್ಕೆ ಎಲ್ಲರೂ ತಲೆಬಾಗಲೇಬೇಕು ಮೂರು ಚುನಾವಣೆಗಳಲ್ಲಿ ಗೆದ್ದ ಮಾತ್ರಕ್ಕೆ ರಾಜ್ಯದ ಜನ ತಮ್ಮ ಪರ ಇದ್ದಾರೆ ಎಂದು ಹೇಳಿಕೊಳ್ಳುವುದು ತರವಲ್ಲ. ಜೆಡಿಎಸ್ ನ ಯಾವುದೇ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಶಾಸಕ ಸ್ವರೂಪ್, ನಾನಾಗಲಿ ಸಮೃದ್ಧಿ ಮಂಜುನಾಥ್ ಆಗಲಿ ಶರಣ ಗೌಡ ಕುಂದಾಪುರ ಆಗಲಿ ನಾವೆಲ್ಲರೂ ಯುವ ಶಾಸಕರು ಸ್ನೇಹಿತರು ಆಗಿದ್ದೇವೆ ನಾವು ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷವನ್ನು ತೊರೆಯುವುದಿಲ್ಲ ಎಂದು ವಿಶ್ವಾಸವ್ಯಕ್ತಪಡಿಸಿದರು.

        ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಜಿಲ್ಲಾ ವಕ್ತಾರ ಹೊಂಗೆರೆ ರಘು, ನಗರಸಭೆ ಮಾಜಿ ಸದಸ್ಯ ಶ್ರೇಯಸ್ ಇತರರು ಉಪಸ್ಥಿತರಿದ್ದರು.

You cannot copy content of this page

Exit mobile version