Home ರಾಜ್ಯ ನಾವು ಮಂಡ್ಯ, ಕೋಲಾರ ಮತ್ತು ಹಾಸನದಿಂದ ಸ್ಪರ್ಧಿಸಲಿದ್ದೇವೆ: ಎಚ್‌ ಡಿ ಕುಮಾರಸ್ವಾಮಿ

ನಾವು ಮಂಡ್ಯ, ಕೋಲಾರ ಮತ್ತು ಹಾಸನದಿಂದ ಸ್ಪರ್ಧಿಸಲಿದ್ದೇವೆ: ಎಚ್‌ ಡಿ ಕುಮಾರಸ್ವಾಮಿ

0

ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಈ ವಿಷಯವಾಗಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ನಾವು ಮೂರು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದೇವೆ ಎಂದು ಅವರು ಹೇಳಿದರು. ಮಂಡ್ಯ, ಕೋಲಾರ ಹಾಗೂ ಹಾಸನದಿಂದ ನಮ್ಮ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಾವು ಬಿಜೆಪಿ ಬಳಿ 3-4 ಸೀಟುಗಳನ್ನು ಕೇಳಿದ್ದು, ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳಲು ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಒಳಜಗಳದಿಂದ ಕಂಗಾಲಾಗಿರುವ ಬಿಜೆಪಿಗೆ ಜೆಡಿಎಸ್‌ ಜೊತೆಗಿನ ಮೈತ್ರಿಯ ಕುರಿತು ಅಷ್ಟೇನೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಒಂದೆಡೆ ಟಿಕೆಟ್‌ ವಂಚಿತ ನಾಯಕರನ್ನು ಸಮಾಧಾನಿಸುವ ಕೆಲಸದಲ್ಲಿ ತೊಡಗಿದ್ದರೆ ಇನ್ನೊಂದೆಡೆ ಅದು ಮಂಡ್ಯ ಕ್ಷೇತ್ರದ ಕಗ್ಗಂಟನ್ನು ಬಿಡಿಸುವತ್ತ ತಲೆ ಕೆಡಿಸಿಕೊಂಡಿದೆ.

ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ. ಮಾರ್ಚ್ 21 ರಂದು ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಬಳಿಕ ಮಾರ್ಚ್ 24 ರವರೆಗೆ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಮಾ.25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ.

You cannot copy content of this page

Exit mobile version