ತಿಂಪು/ನವದೆಹಲಿ: ಭೀಕರ ದೆಹಲಿ ಸ್ಫೋಟಗಳ ಹಿಂದಿನ ಸೂತ್ರಧಾರರನ್ನು ನ್ಯಾಯಾಲಯದ (ನ್ಯಾಯ) ಮುಂದೆ ನಿಲ್ಲಿಸಿ ಶಿಕ್ಷಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಈ ಸಂಚನ್ನು ತನಿಖಾ ಸಂಸ್ಥೆಗಳು ಭೇದಿಸುತ್ತವೆ ಎಂದು ಅವರು ತಿಳಿಸಿದರು. ಭೂತಾನ್ ರಾಜಧಾನಿ ತಿಂಪುನಲ್ಲಿ ಮಂಗಳವಾರ ನಡೆದ ಒಂದು ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದರು. “ಬಾಧಿತ ಕುಟುಂಬಗಳ ನೋವನ್ನು ಅರ್ಥಮಾಡಿಕೊಂಡಿದ್ದೇನೆ. ಇಡೀ ದೇಶವು ಅವರಿಗೆ ಬೆಂಬಲವಾಗಿ ನಿಂತಿದೆ. ಈ ಘಟನೆಯ ಬಗ್ಗೆ ನಾನು ಎಲ್ಲಾ ತನಿಖಾ ಸಂಸ್ಥೆಗಳಿಂದ ಆಗಾಗ್ಗೆ ವಿವರಗಳನ್ನು ತಿಳಿದುಕೊಳ್ಳುತ್ತಿದ್ದೇನೆ” ಎಂದು ಅವರು ಹೇಳಿದರು.
ಪ್ರತಿ ಅಪರಾಧಿಯನ್ನೂ ಬೇಟೆಯಾಡಿ: ಶಾ
ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟಕ್ಕೆ ಕಾರಣರಾದ ಪ್ರತಿಯೊಬ್ಬ ಅಪರಾಧಿಯನ್ನೂ ಬೇಟೆಯಾಡಿ ಬಂಧಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಈ ಮಾರಣಹೋಮದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರೂ ತನಿಖಾ ಸಂಸ್ಥೆಗಳ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.
