Thursday, June 13, 2024

ಸತ್ಯ | ನ್ಯಾಯ |ಧರ್ಮ

ಕರ್ನಾಟಕ ಮೂಲದ ಜಗದ್ವಿಖ್ಯಾತ ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ನಿಧನ

ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ಅಮೇರಿಕಾದಲ್ಲಿ ನಿಧನರಾಗಿದ್ದಾರೆ. ಮೂಲತಃ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯವರಾದ ಸಿ.ಆರ್ ರಾವ್ ಹಲವು ವರ್ಷಗಳಿಂದ ಅಮೇರಿಕಾದಲ್ಲಿ ನೆಲೆಸಿದ್ದರು. ಅವರಿಗೆ 102 ವರ್ಷ ವಯಸ್ಸಾಗಿತ್ತು.

ಗಣಿತಕ್ಕೆ ಸಂಬಂಧಿಸಿದ ಸಂಖ್ಯಾಶಾಸ್ತ್ರ ಕ್ಷೇತ್ರದಲ್ಲಿನ ಸಿಆರ್ ರಾವ್ ಅವರು ಮಾಡಿರುವ ಸಾಧನೆಗಾಗಿ ಕೇಂದ್ರ ಸರ್ಕಾರ ಭಾರತದ ಅತ್ಯುನ್ನತ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 75 ವರ್ಷಗಳ ಹಿಂದೆ ಸಂಖ್ಯಾಶಾಸ್ತ್ರದಲ್ಲಿ ಕ್ರಾಂತಿಯನ್ನು ಮಾಡಿದ್ದ ರಾವ್ ಅವರ ಅಪಾರ ಕೊಡುಗೆಯ ಸ್ಮರಣಾರ್ಥ 2023ರ ಸಾಲಿನ ನೊಬೆಲ್ ಪ್ರಶಸ್ತಿಗೆ ಸಮಾನವಾದ ‘ಇಂಟರ್‌ನ್ಯಾಷನಲ್ ಪ್ರೈಜ್ ಆಫ್ ಸ್ಟ್ಯಾಟಸ್ಟಿಕ್ಸ್ 2023’ ಅಂತಾರಾಷ್ಟ್ರೀಯ ಪ್ರಸ್ತಿಗೆ ಭಾಜನರಾಗಿದ್ದರು.

ಅಮೆರಿಕ ಅಧ್ಯಕ್ಷರಾಗಿದ್ದ ಜಾರ್ಜ್ ಬುಷ್ ಅವರು 2002ರಲ್ಲಿ ದೇಶದ ಅತ್ಯುನ್ನತ ಪ್ರಶಸ್ತಿ ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಅನ್ನು ನೀಡಿ ಗೌರವಿಸಿದ್ದರು.

ಕೆನಡಾದ ಒಟ್ಟಾವದ ಒಂಟಾರಿಯೊದಲ್ಲಿ ನಡೆದಿದ್ದ ದ್ವೈವಾರ್ಷಿಕ ಇಂಟರ್‌ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್ ವರ್ಲ್ಡ್ ಸ್ಟ್ಯಾಟಿಸ್ಟಿಕ್ಸ್ ಕಾಂಗ್ರೆಸ್‌ನಲ್ಲಿ ಸಿಆರ್ ರಾವ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಪ್ರಶಸ್ತಿಯೂಂದಿಗೆ 80,000 ಡಾಲರ್ ನಗದು ನೀಡಲಾಗಿತ್ತು.

ಅಷ್ಟೆ ಅಲ್ಲದೆ ಸಂಖ್ಯಾ ಶಾಸ್ತ್ರ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ನೀಡಿ ಗೌರವಿಸಲಾಗಿದೆ.

ತಮ್ಮ ಏಳು ದಶಕಗಳ ವೃತ್ತಿಜೀವನದಲ್ಲಿ, ರಾವ್ ಸುಮಾರು 51 ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು, ಅವರಲ್ಲಿ ಅನೇಕರು ತಮ್ಮದೇ ಆದ ಕ್ಷೇತ್ರಗಳಲ್ಲಿ ಪ್ರಸಿದ್ಧರಾಗಿದ್ದಾರೆ. ಇವರಲ್ಲಿ, ದೊಡ್ಡ ವಿಚಲನೆಗಳ ಬಗ್ಗೆ ಮಾಡಿದ ಕೆಲಸಕ್ಕಾಗಿ 2007 ರಲ್ಲಿ ಪ್ರತಿಷ್ಠಿತ ಅಬೆಲ್ ಪ್ರಶಸ್ತಿಯನ್ನು ಗೆದ್ದ ಕೆ.ಆರ್.ಪಾರ್ಥಸಾರಥಿ, ಆರ್.ರಂಗರಾವ್, ವಿ.ಎಸ್.ವರದರಾಜನ್ ಮತ್ತು ಎಸ್.ಆರ್.ಎಸ್.ವರದನ್ ಅವರ ನಾಲ್ವರು ಅತ್ಯಂತ ಪ್ರಸಿದ್ಧರಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು