Saturday, June 21, 2025

ಸತ್ಯ | ನ್ಯಾಯ |ಧರ್ಮ

ಯಡಿಯೂರಪ್ಪ ಪಕ್ಷದ ಹೈಕಮಾಂಡನ್ನು ಬ್ಲಾಕ್‌ ಮೇಲ್‌ ಮಾಡುತ್ತಿದ್ದಾರೆ: ಯತ್ನಾಳ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವಂತೆ ಹೈಕಮಾಂಡನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಿ, ಇದರೊಂದಿಗೆ ಕರ್ನಾಟಕ ಬಿಜೆಪಿ ಘಟಕದಲ್ಲಿ ಒಳಜಗಳ ಮತ್ತೆ ತೀವ್ರಗೊಂಡಿದೆ.

ಸೋಮವಾರ ರಾತ್ರಿ ಮೇಲಿನಂತೆ ಆರೋಪಗಳನ್ನು ಮಾಡಿದ ನಂತರ, “ಹೈಕಮಾಂಡ್ ಏಕೆ ಹೆದರುತ್ತಿದೆ ಎಂದು ನನಗೆ ತಿಳಿದಿಲ್ಲ. ಅವರು ಶಿಸ್ತುಕ್ರಮದ ಬಗ್ಗೆ ಮಾತನಾಡುತ್ತಾರೆ. ಹಾಗಿದ್ದರೆ ನಾವು ಗುಲಾಮರೇ? ನಮಗೆ ಶಕ್ತಿ ಇಲ್ಲವೇ? ನಮಗೂ ಜನರ ಬೆಂಬಲವಿದೆ’ ಎಂದು ಯಡಿಯೂರಪ್ಪ ಕುಟುಂಬ ಹಾಗೂ ಹೈಕಮಾಂಡ್‌ ವಿರುದ್ಧ ಕೆಂಡ ಕಾರಿದರು.

2025ರ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಯಡಿಯೂರಪ್ಪ ಕೇಂದ್ರ ನಾಯಕರನ್ನು ಬ್ಲ್ಯಾಕ್‌ ಮೇಲ್ ಮಾಡಿದ್ದರು. ನಾನು ರಾಜ್ಯದ ಬೇರೆಡೆ ಪ್ರಚಾರ ಮಾಡದೆ ಕೇವಲ ಶಿವಮೊಗ್ಗಕ್ಕೆ ಸೀಮಿತವಾಗಿರುವುದಾಗಿ ಹಿರಿಯ ನಾಯಕತ್ವವನ್ನು ಹೆದರಿಸಿದ್ದರು ಎಂದು ಯತ್ನಾಳ್‌ ಆರೋಪಿಸಿದ್ದಾರೆ.

ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಬಲಿಪಶು ಮಾಡಲಾಗಿದೆ ಎಂದೂ ಶಾಸಕ ಯತ್ನಾಳ್ ಹೇಳಿದ್ದಾರೆ.

ಅಚ್ಚರಿಯೆಂಬಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು. ಈಗ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಅವರು ತಿಳಿಸಿದರು. ತಮ್ಮನ್ನು ಸೋಲಿಸಲು ವಿಜಯೇಂದ್ರ ಕ್ಷೇತ್ರದಲ್ಲಿ ಹಾಣವನ್ನು ಚೆಲ್ಲಿದ್ದಾರೆ ಎಂದು ಬೊಮ್ಮಾಯಿ ಅವರೇ ಹೇಳಿಕೊಂಡಿದ್ದರು.

“ತಂದೆ ಮತ್ತು ಮಗ ಇಬ್ಬರೂ ಏನು ಪಿತೂರಿ ಮಾಡಿದ್ದಾರೆ ಎಂಬುದರ ಬಗ್ಗೆ ಸತ್ಯ ಹೊರಬರಬೇಕು” ಎಂದು ಅವರು ಹೇಳಿದರು.

ಶಿಕಾರಿಪುರದಲ್ಲಿ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಯತ್ನಾಳ್ ಹೇಳಿದರು.

ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಪಕ್ಷದ ನಾಯಕ ಸೋಮಣ್ಣ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದರು ಎಂದ ಅವರು, ಕನಕಪುರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಯಡಿಯೂರಪ್ಪ ನಡುವೆ ಒಳ ಒಪ್ಪಂದವಾಗಿತ್ತು ಎಂದೂ ಅವರು ಆರೋಪಿಸಿದರು.

ಈ ಆರೋಪಗಳಿಗೆ ಪಕ್ಷದ ಹೈಕಮಾಂಡ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದರೆ ವಿಜಯೇಂದ್ರ ಅವರು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page