Saturday, November 23, 2024

ಸತ್ಯ | ನ್ಯಾಯ |ಧರ್ಮ

ಭರ್ಜರಿ ಗೆಲುವು ದಾಖಲಿಸಿದ ಯೋಗೇಶ್ವರ್‌: ನಿಖಿಲ್‌ಗೆ 3ನೇ ಭಾರಿ ಮುಖಭಂಗ

ರಾಮನಗರ: ಸಾಕಷ್ಟು ಪ್ರತಿಷ್ಟೆಗಳ ಕಣವಾಗಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ದಾಖಲಿಸಿದ್ದಾರೆ. ಒಟ್ಟು 20 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಅಂಚೆ ಮತಗಳನ್ನು ಹೊರತು ಪಡಿಸಿ, 25,357 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

20 ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 1,12,388 ಮತ ಪಡಿದಿದ್ದಾರೆ.ಎನ್ ಡಿಎ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87,031 ಮತ ದಾಖಲಿಸಿದ್ದಾರೆ.

ಕಳೆದೆರೆಡು ಚುನಾವಣೆಗಳಲ್ಲಿಯು ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಸತತ ಮೂರನೇ ಭಾರಿಯು ಸೋಲು ಕಾಣುವ ಮೂಲಕ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ.

ಹ್ಯಾಟ್ರಿಕ್ ಸೋಲಿನಿಂದ ಹೊರಬಂದಿರುವ ಸಿಪಿವೈ, ಇದೇ ಮೊದಲ ಭಾರಿಗೆ (1999 ರಿಂದ ಈ ವರೆಗೂ ) ಒಂದು ಲಕ್ಷ ಮತಗಳನ್ನು ಪಡೆದುಕೊಂಡಿದ್ದಾರೆ.

ಈ ವರೆಗೂ 9 ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಸಿಪಿವೈಗೆ ಇದು ಆರನೇ ಗೆಲುವಾಗಿದೆ.

ಚನ್ನಪಟ್ಟಣದಲ್ಲಿ ನಡೆದ 2009 ಹಾಗೂ 2011 ರ ವಿಧಾನಸಭಾ ಉಪಚುನಾವಣೆಗಳಲ್ಲಿ 2009 ರಲ್ಲಿ ಸೋಲು ಕಂಡಿದ್ದ ಸಿಪಿವೈ 2011 ರಲ್ಲಿ ಗೆಲುವು ದಾಖಲಿಸಿದ್ದರು

ಬಿಜೆಪಿ ತ್ಯಜಿಸಿ ಬಂದ ಸಿ.ಪಿ. ಯೋಗೇಶ್ವರ್‌ಗೆ ಚನ್ನಪಟ್ಟಣದಲ್ಲಿ ಮಣೆ ಹಾಕಿರುವ ರಾಜ್ಯ ಕಾಂಗ್ರೆಸ್ ನಾಯಕರು, ಈ ಕ್ಷೇತ್ರವನ್ನು ಜೆಡಿಎಸ್‌ನಿಂದ ಕಸಿದುಕೊಳ್ಳಲೇಬೇಕೆಂಬ ಪಣ ತೊಟ್ಟಿದ್ದರು. ರಾಜಕೀಯ ಜಿದ್ದಾಜಿದ್ದಿಗೆ ಹೆಸರುವಾಸಿ ಯಾಗಿರುವ ಈ ಕ್ಷೇತ್ರ ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಪ್ರತಿಷ್ಠೆಯ ಕಣವಾಗಿಯೂ ಬದಲಾಗಿತ್ತು.ಪ್ರಮುಖ ಅಭ್ಯರ್ಥಿಗಳಾದ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ನ ಸಿ.ಪಿ. ಯೋಗೇಶ್ವರ್ ನಡುವೆ ನೇರ ಹಣಾಹಣಿಯೊಂದಿಗೆ, ತೀವ್ರ ಪೈಪೋಟಿ ನಡೆದಿತ್ತು.. ಇವರೊಂದಿಗೆ ಇತರ 8 ಪಕ್ಷಗಳ ಅಭ್ಯರ್ಥಿಗಳು ಹಾಗೂ 21 ಪಕ್ಷೇತರರು ಸಹ ಸ್ಪರ್ದಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page