Thursday, June 19, 2025

ಸತ್ಯ | ನ್ಯಾಯ |ಧರ್ಮ

ಕಾಗೆಯ ಗೂಡಿಗೆ ಮೊಟ್ಟೆಯಿಡುವ ಬುದ್ಧಿ ನಿಮ್ಮದು: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿಯ ಯಾವ ನಾಯಕರು ಹೋರಾಡಿದ್ದಾರೆಯೇ ಎಂದು ಪ್ರಶ್ನಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯ ಬಿಜೆಪಿ ಘಟವು ವಾಗ್ದಾಳಿ ನಡೆಸಿದೆ.

ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಗಾಂಧೀಜಿ ಸೇರಿದಂತೆ ಅನೇಕರು ಹೋರಾಟ ಮಾಡಿದ್ದಾರೆ. ಆದರೆ ಬಿ.ಎಲ್‌.ಸಂತೋಷ್‌ ಒಳಗೊಂಡಂತೆ ಬಿಜೆಪಿಯ ಯಾವ ನಾಯಕರಾದರೂ ದೇಶಕ್ಕಾಗಿ ಹೋರಾಡಿದ್ದಾರೆಯೇ? ಎಂದು ಪ್ರಶ್ನಿಸಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕವು, ಮಾತೆತ್ತಿದರೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇರವಾಗಿ ಭಾಗವಹಿಸಿದ ರೀತಿಯಲ್ಲಿ ಮಾತನಾಡುವ ಸಿದ್ದರಾಮಯ್ಯಗೂ ಸ್ವಾತಂತ್ರ್ಯಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದೆ.

ರಾಜಕೀಯ ಹೊರತುಪಡಿಸಿ, ಜನಪರವಾಗಿ ಹೋರಾಡಿದ ಒಂದೇ ಒಂದು ಉದಾಹರಣೆ ನೀಡಲು ಸಿದ್ದರಾಮಯ್ಯ ಅವರಿಗೆ ಸಾಧ್ಯವೇ? ಸಾಧ್ಯವೇ ಇಲ್ಲ, ಏಕೆಂದರೆ ಕಾಗೆಯ ಗೂಡಿನಲ್ಲಿ ಮೊಟ್ಟೆಯಿಡುವ ಕೋಗಿಲೆಯ ಬುದ್ಧಿ ಸಿದ್ದರಾಮಯ್ಯ ಅವರದ್ದು ಎಂದು ವಾಗ್ದಾಳಿ ನಡೆಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page