Friday, June 14, 2024

ಸತ್ಯ | ನ್ಯಾಯ |ಧರ್ಮ

ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಬಾರಿಸಬೇಕು – ಶಿವರಾಜ ತಂಗಡಗಿ

ಕೊಪ್ಪಳ: ಬಿಜೆಪಿಯ ಕೇಂದ್ರ ಸರ್ಕಾರವು ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿತ್ತು. ಅದರ ಭರವಸೆಯಂತೆ ಅದು ಹತ್ತು ವರ್ಷಕ್ಕೆ ಇಪ್ಪತ್ತು ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು ಆದರೆ ಹಾಗೆ ಉದ್ಯೋಗ ಸೃಷ್ಟಿಸದೆ ಅದು ಯುವಕರನ್ನು ವಂಚಿಸಿದೆ ಎಂದು ಸಚಿವ ಶಿವರಾಜ ತಂಗಡಗಿ ಆರೋಪಿಸಿದ್ದಾರೆ. ಈಂತಹ ವಂಚಕ ಸರ್ಕಾರವನ್ನು ಬೆಂಬಲಿಸಿ ʼಮೋದಿ, ಮೋದಿʼ ಎನ್ನುತ್ತಿರುವ ಯುವಕರಿಗೆ ಕಪಾಳಮೋಕ್ಷ ಮಾಡಬೇಕಿದೆ ಎಂದು ಕಿಡಿಕಾರುವ ಮೂಲಕ ಸಚಿವ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ನಿನ್ನೆ ದಿನ ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಪ್ರಧಾನಿ ಮೋದಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಹೇಳಿದರು.

“ಬಿಜೆಪಿಯವರು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಪ್ರಧಾನಿ ಮೋದಿಯವರು ಯುವಕರಿಗೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅವರು ಉದ್ಯೋಗ ನೀಡಿದ್ದಾರಾ? ಅವರಿಗೆ ನಾಚಿಕೆಯಾಗಬೇಕು. ಇನ್ನೂ ‘ಮೋದಿ ಮೋದಿ’ ಎಂದು ಜಪಿಸುತ್ತಿರುವ ಅವರ ಯುವ ಬೆಂಬಲಿಗರ ಕಪಾಳಕ್ಕೆ ಹೊಡೆಯಬೇಕು” ಎಂದು ತಂಗಡಗಿ ಕಿಡಿ ಕಾರಿದರು.

“ಇನ್ನೂ 5 ವರ್ಷಗಳ ಕಾಲ ಜನರನ್ನು ಮೂರ್ಖರನ್ನಾಗಿ ಮಾಡಬಹುದು ಎಂದು ಅವರು(ಬಿಜೆಪಿ) ಭಾವಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾರತದಲ್ಲಿ 100 ಸ್ಮಾರ್ಟ್ ಸಿಟಿಗಳ ಭರವಸೆ ನೀಡಿದರು. ಅವು ಎಲ್ಲಿವೆ? ಹೆಸರಿಸಿ ಪ್ರಧಾನಿ ಮೋದಿ ಸಮುದ್ರದ ಆಳಕ್ಕೆ ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ. ಒಬ್ಬ ಪ್ರಧಾನಿ ಮಾಡಬೇಕಾದ ಕೆಲಸ ಇದೇನಾ?” ತಂಗಡಗಿ ಪ್ರಶ್ನಿಸಿದರು.

ಇದೇ ರೀತಿ ಮೋದಿ ಮೋದಿ ಎನ್ನುತ್ತಿದ್ದ ಸಂಗಣ್ಣ ಕರಡಿಯವರಿಗೂ ಬಿಜೆಪಿ ಮೋಸ ಮಾಡಿದೆ.  ಪಾಪ ಒಳ್ಳೆಯ ಮನುಷ್ಯ ಅವರಿಗೆ ಟಿಕೆಟ್ ನೀಡದೆ ಮನೆಯಲ್ಲಿ ಕೂಡಿಸಿದ್ದಾರೆ. ಅವರಿಗೆ ಟಿಕೆಟ್‌ ನೀಡದಿರುವ ಕಾರಣ ನಮ್ಮ ಅಭ್ಯರ್ಥಿ ರಾಜಣ್ಣ ಗೆದ್ದಂತೆ ಎಂದು ಅವರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು